PODCAST

ರಣಭೀಕರ ಮೇಘಸ್ಫೋಟಕ್ಕೆ ತತ್ತರಿಸಿದ ಉತ್ತರಾಖಂಡ್.. ಇಲ್ಲಿವೆ ಟಾಪ್​ 10 ಭಯಾನಕ ಫೋಟೋಸ್​!

ದೇವಭೂಮಿ ಉತ್ತರಾಖಂಡ್​​​ನಲ್ಲಿ ಭಾರಿ ಮಳೆ. ದಿಢೀರ್ ಪ್ರವಾಹ, ಮೇಘಸ್ಫೋಟದಿಂದ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ.. ಉತ್ತರಕಾಶಿ ಜಿಲ್ಲೆಯ ಧರಾಲಿ ಗ್ರಾಮ ಕೆಸರಿನಡಿ ಸಮಾಧಿಯಾಗಿದೆ. ನೋಡ ನೋಡುತ್ತಲೇ ಮನೆಗಳು, ಕಟ್ಟಡಗಳು ಕುಸಿದಿದ್ದು ದುರಂತದಲ್ಲಿ ಐವರು ದುರ್ಮರಣಕ್ಕೀಡಾಗಿದ್ದು ನೂರಾರು ಮಂದಿ ನಾಪತ್ತೆಯಾಗಿದ್ದಾರೆ.

ದೇವಭೂಮಿ ಉತ್ತರಾಖಂಡ್​​​ನಲ್ಲಿ ಭಾರಿ ಮಳೆ. ದಿಢೀರ್ ಪ್ರವಾಹ, ಮೇಘಸ್ಫೋಟದಿಂದ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ.. ಉತ್ತರಕಾಶಿ ಜಿಲ್ಲೆಯ ಧರಾಲಿ ಗ್ರಾಮ ಕೆಸರಿನಡಿ ಸಮಾಧಿಯಾಗಿದೆ. ನೋಡ ನೋಡುತ್ತಲೇ ಮನೆಗಳು, ಕಟ್ಟಡಗಳು ಕುಸಿದಿದ್ದು ದುರಂತದಲ್ಲಿ ಐವರು ದುರ್ಮರಣಕ್ಕೀಡಾಗಿದ್ದು ನೂರಾರು ಮಂದಿ ನಾಪತ್ತೆಯಾಗಿದ್ದಾರೆ.

ಬೆಟ್ಟದ ಮೇಲಿಂದ ಬಿರುಗಾಳಿಯಂತೆ ನುಗ್ಗಿದ ಕೆಸರು ಮಿಶ್ರಿತ ನೀರು ಪ್ರಳಯ ಸೃಷ್ಟಿಸಿದ್ದು ಒಂದೊಂದು ದೃಶ್ಯಗಳೂ ಬೆಚ್ಚಿ ಬೀಳಿಸುವಂತಿದೆ. ದಿಢೀರ್ ಮೇಘಸ್ಫೋಟಕ್ಕೆ ಹೆದರಿದ ಧರಾಲಿ ಗ್ರಾಮದ ಜನ ಪ್ರಾಣ ಉಳಿಸಿಕೊಳ್ಳಲು ದಿಕ್ಕಾಪಾಲಾಗಿದ್ದಾರೆ.

ನೀರಿನ ರಭಸಕ್ಕೆ ಬಹುಮಹಡಿ ಕಟ್ಟಡಗಳು ಆಟಿಕೆಗಳಂತೆ ಕೊಚ್ಚಿ ಹೋಗಿವೆ. ಗ್ರಾಮದಲ್ಲಿದ್ದ 25ಕ್ಕೂ ಹೆಚ್ಚು ಹೋಟೆಲ್​​ ಹಾಗೂ ಮನೆಗಳು ಧ್ವಂಸಗೊಂಡಿವೆ. ಇಡೀ ಪ್ರದೇಶ ಕೆಸರುಮಯವಾಗಿದೆ. ಕೆಸರಿನಲ್ಲಿ ಸಿಲುಕಿದ್ದ ವ್ಯಕ್ತಿಯೊಬ್ಬರು ಹೊರಗೆ ಎದ್ದು ಬರಲು ಹರಸಾಹಸ ಪಟ್ಟು ಪಾರಾಗಿದ್ದಾರೆ.

ಎಸ್​ಡಿಆರ್​ಎಫ್, ಎನ್​ಡಿಆರ್​ಎಫ್, ಐಟಿಬಿಪಿ, ಸೇನೆ ಮತ್ತು ಎರಡು ಎಂಐಜಿ ಹಾಗೂ ಎರಡು ಚಿನೂಕ್ ಹೆಲಿಕಾಪ್ಟರ್​ಗಳನ್ನು ಬಳಸಿ ರಕ್ಷಣಾ ಕಾರ್ಯಾಚರಣೆ ಮಾಡ್ತಿದೆ. ಆಧುನಿಕ ಡ್ರೋನ್​ಗಳನ್ನು ಬಳಸಿ ನಾಪತ್ತೆಯಾದವರ ಹುಡುಕಾಟ ನಡೆಸಲಾಗ್ತಿದೆ. ಧರಾಲಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಡಿತಗೊಂಡಿರೋದ್ರಿಂದ, ಬುಲ್ಡೋಸರ್​ಗಳು ಮತ್ತು ಇತರ ಯಂತ್ರಗಳು ಸ್ಥಳಕ್ಕೆ ತಲುಪಲು ಸಾಧ್ಯವಾಗುತ್ತಿಲ್ಲ ಎಂದು ತಿಳಿದುಬಂದಿದೆ

admin

About Author

Leave a Reply

Your email address will not be published. Required fields are marked *

Get Latest Updates and big deals

    Our expertise, as well as our passion for web design, sets us apart from other agencies.

    Dream Times @2025. All Rights Reserved. Powered By Exalt Techsoft