ಮೇಕೆದಾಟು ಯೋಜನೆ ಕರ್ನಾಟಕಕ್ಕಿಂತ ತಮಿಳುನಾಡಿಗೆ ಹೆಚ್ಚು ಉಪಯೋಗವಾಗಲಿದೆ. ಕಷ್ಟ ಕಾಲದಲ್ಲಿ ಅವರ ಪಾಲಿನ ನೀರನ್ನು ಬಿಡಲು ಈ ಯೋಜನೆ ನೆರವಾಗಲಿದೆ. ಹೀಗಾಗಿ, ಸುಪ್ರೀಂ ಕೋರ್ಟಿನ ತೀರ್ಪು ಕರ್ನಾಟಕಕ್ಕೆ ಮಾತ್ರವಲ್ಲ, ತಮಿಳುನಾಡು, ಪುದುಚೆರಿಗೂ ಸಂದ ಜಯ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ತೀರ್ಪು ಕರ್ನಾಟಕಕ್ಕೆ ಮಾತ್ರವಲ್ಲ ತಮಿಳುನಾಡು, ಪುದುಚೆರಿಗೂ ಸಂದ ಜಯ : ಡಿ.ಕೆ.ಶಿವಕುಮಾರ್ !




