Virat Kohli: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯು ಜನವರಿ 11 ರಿಂದ ಶುರುವಾಗಲಿದೆ. ಈ ಸರಣಿಗೂ ಮುನ್ನ ದೇಶೀಯ ಅಂಗಳದಲ್ಲಿ ಮತ್ತೊಂದು ಪಂದ್ಯವಾಡಲು ವಿರಾಟ್ ಕೊಹ್ಲಿ ನಿರ್ಧರಿಸಿದ್ದಾರೆ. ಪ್ರಸ್ತುತ ನಡೆಯುತ್ತಿರುವ ವಿಜಯ ಹಝಾರೆ ಟೂರ್ನಿಯಲ್ಲಿ ಕೊಹ್ಲಿ ಈವರೆಗೆ 2 ಪಂದ್ಯಗಳನ್ನಾಡಿದ್ದಾರೆ. ಇದೀಗ ಮತ್ತೊಂದು ಮ್ಯಾಚ್ನಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.
-
ನ್ಯೂರಾಲಿಂಕ್ ಮೆದುಳಿನ ಚಿಪ್: ಪಾರ್ಶ್ವವಾಯು ಪೀಡಿತ ವ್ಯಕ್ತಿಯ ಸ್ವಾವಲಂಬಿ ಬದುಕಿಗೆ ಹೊಸ ಆಶಾಕಿರಣ
ಬೆಂಗಳೂರು, ಫೆಬ್ರವರಿ 4, 2026 : ಇಂದು ನಡೆದ ‘ವಿಶ್ವ ಸರ್ಕಾರಗಳ ಶೃಂಗಸಭೆ’ಯಲ್ಲಿ (World Governments Summit) ಎಲಾನ್ ಮಸ್ಕ್ ಒಡೆತನದ ನ್ಯೂರಾಲಿಂಕ್ ಕಂಪನಿಯ ಮೊದಲ ಮೆದುಳಿನ ಚಿಪ್ ಅಳವಡಿಸಿಕೊಂಡ ರೋಗಿಯು ತನ್ನ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಪಾರ್ಶ್ವವಾಯುವಿನಿಂದಾಗಿ ದೈಹಿಕ ಚಲನವಲನ ಕಳೆದುಕೊಂಡಿದ್ದ ನೋಲ್ಯಾಂಡ್ ಅರ್ಬಾಗ್ ಎಂಬುವವರು, ಈ ಚಿಪ್ ಸಹಾಯದಿಂದ ಕೇವಲ ಆಲೋಚನೆಗಳ ಮೂಲಕ ಕಂಪ್ಯೂಟರ್ ಅನ್ನು ನಿಯಂತ್ರಿಸುತ್ತಿರುವುದಾಗಿ ತಿಳಿಸಿದ್ದಾರೆ. ಇದು ವೈದ್ಯಕೀಯ ತಂತ್ರಜ್ಞಾನ ಲೋಕದಲ್ಲಿ ಒಂದು ಐತಿಹಾಸಿಕ ಮೈಲಿಗಲ್ಲು ಎಂದು ಪರಿಗಣಿಸಲ್ಪಟ್ಟಿದೆ. ಈ ಅತ್ಯಾಧುನಿಕ…
-
ಅಬಕಾರಿ ಲಂಚ ಪ್ರಕರಣ ಮರೆಮಾಚಲು ‘ವಿಬಿ-ಜಿ ರಾಮ್ ಜಿ’ ಕಾಯ್ದೆ ವಿರುದ್ಧ ನಿರ್ಣಯ ಮಂಡನೆ : ಆರ್. ಅಶೋಕ್!

ನಿಯಮ ಪ್ರಕಾರ ಎಲ್ಲರಿಗೂ 7 ದಿನ ಮುನ್ನ ನೋಟಿಸ್ ನೀಡಬೇಕು. ಇದು ಸದನದ ನಿರ್ಣಯವಲ್ಲ, ಬದಲಿಗೆ ಕಾಂಗ್ರೆಸ್ ಪಕ್ಷದ ಸರಕಾರದ ನಿರ್ಣಯ’ ಎಂದು ಅಶೋಕ್ ದೂರಿದ್ದಾರೆ. Spread the love
-
ದ್ವೇಷ ಭಾಷಣ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು

ಬೆಳ್ತಂಗಡಿ: ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಜಾರಿಯಾಗಿದ್ದ ಜಾಮೀನುರಹಿತ ವಾರೆಂಟ್ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಬಂಟ್ವಾಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. Spread the love

ನ್ಯೂಝಿಲೆಂಡ್ ವಿರುದ್ಧದ ಸರಣಿಗೂ ಮುನ್ನ ವಿಜಯ ಹಝಾರೆ ಟೂರ್ನಿಯಲ್ಲಿ ಮತ್ತೊಂದು ಪಂದ್ಯವಾಡಲು ವಿರಾಟ್ ಕೊಹ್ಲಿ ನಿರ್ಧರಿಸಿದ್ದಾರೆ. ಜನವರಿ 6 ರಂದು ಬೆಂಗಳೂರಿನ ಆಲೂರಿನಲ್ಲಿರುವ ಕೆಎಸ್ಸಿಎ ಮೈದಾನದಲ್ಲಿ ನಡೆಯಲಿರುವ ರೈಲ್ವೇಸ್ ವಿರುದ್ಧದ ಪಂದ್ಯದಲ್ಲಿ ದೆಹಲಿ ಪರ ವಿರಾಟ್ ಕೊಹ್ಲಿ ಕೂಡ ಕಣಕ್ಕಿಳಿಯಲಿದ್ದಾರೆ ಎಂದು ದೆಹಲಿ ಕ್ರಿಕೆಟ್ ಅಸೋಸಿಯೇಷನ್ ಖಚಿತಪಡಿಸಿದೆ.
ಇದಕ್ಕೂ ಮುನ್ನ ವಿರಾಟ್ ಕೊಹ್ಲಿ ಎರಡು ಪಂದ್ಯಗಳನ್ನಾಡಿದ್ದಾರೆ. ಬೆಂಗಳೂರಿನ ಸಿಇಒ ಮೈದಾನದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಆಂಧ್ರ ಪ್ರದೇಶ್ ವಿರುದ್ಧ 131 ರನ್ ಬಾರಿಸಿದ್ದರು. ಇನ್ನು ದ್ವಿತೀಯ ಮ್ಯಾಚ್ನಲ್ಲಿ ಗುಜರಾತ್ ವಿರುದ್ಧ 77 ರನ್ ಕಲೆಹಾಕಿದ್ದರು.
ಈ ಪಂದ್ಯದ ಬಳಿಕ ಮುಂಬೈಗೆ ತೆರಳಿದ್ದ ವಿರಾಟ್ ಕೊಹ್ಲಿ ಜನವರಿ 6 ರೊಳಗೆ ಮತ್ತೆ ದೆಹಲಿ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ಡಿಡಿಎಸ್ಎ ತಿಳಿಸಿದ್ದಾರೆ. ಅದರಂತೆ ದೆಹಲಿ ತಂಡದ 6ನೇ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಮತ್ತೆ ಬ್ಯಾಟ್ ಬೀಸಲಿದ್ದಾರೆ. ಈ ಪಂದ್ಯದ ಬಳಿಕ ವಿರಾಟ್ ಕೊಹ್ಲಿ ಟೀಮ್ ಇಂಡಿಯಾಚವನ್ನು ಸೇರಿಕೊಳ್ಳಲಿದ್ದಾರೆ.
ಭಾರತ-ನ್ಯೂಝಿಲೆಂಡ್ ಸರಣಿ:
ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಏಕದಿನ ಸರಣಿಯು ಜನವರಿ 11 ರಿಂದ ಶುರುವಾಗಲಿದೆ. ಈ ಸರಣಿಗಾಗಿ ಜನವರಿ 7 ರಂದು ಬರೋಡಾದಲ್ಲಿ ಭಾರತೀಯ ಆಟಗಾರರು ಕೂಡಿಕೊಳ್ಳಲಿದ್ದಾರೆ. ಅಂದರೆ ವಿರಾಟ್ ಕೊಹ್ಲಿ ಬೆಂಗಳೂರಿನಲ್ಲಿ ಪಂದ್ಯ ಮುಗಿಸಿ ಅದೇ ದಿನ ಬರೋಡಾಗೆ ತೆರಳುವ ಸಾಧ್ಯತೆಯಿದೆ.
ರಿಷಭ್ ಪಂತ್ ನಾಯಕ:
ವಿಜಯ ಹಝಾರೆ ಟೂರ್ನಿಯಲ್ಲಿ ದೆಹಲಿ ತಂಡವನ್ನು ರಿಷಭ್ ಪಂತ್ ಮುನ್ನಡೆಸುತ್ತಿದ್ದಾರೆ. ಈಗಾಗಲೇ ಮೂರು ಮ್ಯಾಚ್ಗಳಲ್ಲಿ ನಾಯಕನಾಗಿ ಕಣಕ್ಕಿಳಿದಿರುವ ಪಂತ್ ಅವರನ್ನು ಭಾರತ ಏಕದಿನ ತಂಡದಿಂದ ಕೈ ಬಿಟ್ಟರೆ, ದೇಶೀಯ ಟೂರ್ನಿಯಲ್ಲಿ ಮುಂದುವರೆಯಲಿದ್ದಾರೆ. ಅದು ಕೂಡ ನಾಯಕನಾಗಿ. ಅಂದರೆ ನ್ಯೂಝಿಲೆಂಡ್ ವಿರುದ್ಧದ ಸರಣಿಗೆ ರಿಷಭ್ ಪಂತ್ ಆಯ್ಕೆಯಾಗದಿದ್ದರೆ ವಿಜಯ ಹಝಾರೆ ಟೂರ್ನಿಯಲ್ಲಿ ಅವರು ಕ್ಯಾಪ್ಟನ್ ಆಗಿ ಮುಂದುವರೆಯಲಿದ್ದಾರೆ.
ದೆಹಲಿ ತಂಡ: ರಿಷಭ್ ಪಂತ್ (ನಾಯಕ), ವಿರಾಟ್ ಕೊಹ್ಲಿ, ಇಶಾಂತ್ ಶರ್ಮಾ, ನವದೀಪ್ ಸೈನಿ, ಆಯುಷ್ ಬದೋನಿ, ಅರ್ಪಿತ್ ರಾಣಾ, ಯಶ್ ಧುಲ್, ಸಾರ್ಥಕ್ ರಂಜನ್, ಪ್ರಿಯಾಂಶ್ ಆರ್ಯ, ತೇಜಸ್ವಿ ದಹಿಯಾ, ನಿತೀಶ್ ರಾಣಾ, ಹೃತಿಕ್ ಶೋಕೀನ್, ಹರ್ಷ್ ತ್ಯಾಗಿ, ಸಿಮರ್ಜೀತ್ ಸಿಂಗ್, ಪ್ರಿನ್ಸ್ ಯಾದವ್, ದಿವಿಜ್ ಮೆಹ್ರ, ಆಯುಷ್ ದೋಸೆಜ, ವೈಭವ್ ಕಡ್ಪಲ್, ರೋಹನ್ ರಾಣಾ, ಅನೂಜ್ ರಾವತ್ (ಮೀಸಲು ಆಟಗಾರ).




