Business

ಮತ್ತೆ ಕುಸಿದ ಚಿನ್ನದ ಬೆಲೆ; ಖರೀದಿದಾರರಿಗೆ ಸಿಹಿಸುದ್ದಿ, ಮುಂದಿನ ದರದ ಮೇಲೆ ಎಲ್ಲರ ಕಣ್ಣು

ನವದೆಹಲಿ, ಆಗಸ್ಟ್ 31: ದೇಶದ ಚಿನ್ನದ ಮಾರುಕಟ್ಟೆಯಲ್ಲಿ ಮತ್ತೆ ಬೆಲೆ ಇಳಿಕೆಯಾಗಿದ್ದು, ಚಿನ್ನ ಖರೀದಿಸಲು ಎದುರು ನೋಡುತ್ತಿರುವವರಿಗೆ ಕೊಂಚ ನೆಮ್ಮದಿ ಸಿಕ್ಕಿದೆ. ಸೋಮವಾರದ ವಹಿವಾಟಿನಲ್ಲಿ ಚಿನ್ನದ ದರ ಮತ್ತಷ್ಟು ಕುಸಿತ ಕಂಡಿದ್ದು, ಸತತ ಏರಿಳಿತದ ನಡುವೆ ಹಳದಿ ಲೋಹದ ಬೆಲೆ ಮತ್ತೆ ಇಳಿಕೆಯ ಹಾದಿ ಹಿಡಿದಿದೆ. ಲಭ್ಯವಿರುವ ಮಾರುಕಟ್ಟೆ ಮಾಹಿತಿಯ ಪ್ರಕಾರ 24 ಕ್ಯಾರೆಟ್ ಚಿನ್ನದ ದರ ಪ್ರತಿ 10 ಗ್ರಾಂಗೆ ಸುಮಾರು ₹1,54,940ರ ಮಟ್ಟಕ್ಕೆ ಇಳಿಕೆಯಾಗಿದೆ. ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆಯಲ್ಲಿ ಸಾಕಷ್ಟು ಏರಿಳಿತ […]

Entertainment News

‘ಟಾಕ್ಸಿಕ್’ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸದ್ದು: 5 ದಿನಕ್ಕೆ ₹214 ಕೋಟಿ ದಾಟಿದ ಯಶ್ ಚಿತ್ರ, ವಿಶ್ವದಾದ್ಯಂತ ₹285 ಕೋಟಿ ಗಳಿಕೆ

ಬೆಂಗಳೂರು, ಆಗಸ್ಟ್ 31: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಪ್ರದರ್ಶನ ಮುಂದುವರಿಸಿದೆ. ಬಿಡುಗಡೆಯಾದ ಐದು ದಿನಗಳಲ್ಲೇ ಚಿತ್ರ ಭಾರತದಲ್ಲಿ ₹214.10 ಕೋಟಿ ನಿವ್ವಳ ಗಳಿಕೆ ದಾಖಲಿಸಿದ್ದು, ವಿಶ್ವದಾದ್ಯಂತ ಚಿತ್ರದ ಒಟ್ಟು ಗಳಿಕೆ ₹285.20 ಕೋಟಿಗೆ ತಲುಪಿದೆ ಎಂದು ವರದಿಯಾಗಿದೆ. ಆಗಸ್ಟ್ 26ರಂದು ತೆರೆಕಂಡಿರುವ ‘ಟಾಕ್ಸಿಕ್’ ಮೊದಲ ದಿನವೇ ₹101.10 ಕೋಟಿ ಗಳಿಸುವ ಮೂಲಕ ಭರ್ಜರಿ ಆರಂಭ ಕಂಡಿತ್ತು. ನಂತರದ ದಿನಗಳಲ್ಲಿ ₹37.65 […]

News

‘ವಿಜಯ್‌ ಮುಂದಿನ ಪ್ರಧಾನಿ’ ಕೂಗಿಗೆ ಕಾಂಗ್ರೆಸ್‌ ತಿರುಗೇಟು; ರಾಹುಲ್‌ ಗಾಂಧಿಗೆ ಬೆಂಬಲ ನೀಡದಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ತಮಿಳುನಾಡು ಸರ್ಕಾರದಲ್ಲಿ ಮೈತ್ರಿ ಬಿಕ್ಕಟ್ಟು?

ಚೆನ್ನೈ, ಆಗಸ್ಟ್ 31: ತಮಿಳುನಾಡು ರಾಜಕಾರಣದಲ್ಲಿ ‘ವಿಜಯ್‌ ಮುಂದಿನ ಪ್ರಧಾನಿ’ ಎಂಬ ಕೂಗು ಇದೀಗ ಆಡಳಿತಾರೂಢ ಮೈತ್ರಿಕೂಟದೊಳಗೇ ಹೊಸ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ಹಾಗೂ ಟಿವಿಕೆ ನಾಯಕ ವಿಜಯ್ ಅವರನ್ನು 2029ರ ಲೋಕಸಭಾ ಚುನಾವಣೆಗೆ ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸುವ ಪ್ರಯತ್ನಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಬೆಂಬಲಿಸದಿದ್ದರೆ ಕಾಂಗ್ರೆಸ್‌ನ ಸಚಿವರು ಸಂಪುಟದಿಂದ ಹೊರಬರುವ ಎಚ್ಚರಿಕೆ ನೀಡಿದ್ದಾರೆ. ತಮಿಳುನಾಡು ಪ್ರವಾಸೋದ್ಯಮ ಸಚಿವ ಎಸ್. ರಾಜೇಶ್ ಕುಮಾರ್ ಅವರು, ಟಿವಿಕೆ 2029ರ […]

News

ಅಜ್ಜಿ ಮನೆಗೆ ಹೋಗಿ ಹಿಂದಿರುಗುತ್ತಿದ್ದ ಪುಟಾಣಿ ಮಕ್ಕಳು! ಬೇರೆ ಪರ್ಯಾಯ ದಾರಿ ವ್ಯವಸ್ಥೆ ಇಲ್ಲದ ಕಾರಣ ರೈಲ್ವೆ ಹಳಿ ದಾಟಲು ಪ್ರಯತ್ನ : ಅಜ್ಜಿ ಸೇರಿ ಇಬ್ಬರು ಮೊಮ್ಮಕ್ಕಳು ರೈಲು ಡಿಕ್ಕಿಗೆ ಬಲಿ

ದೊಡ್ಡಬಳ್ಳಾಪುರ, ಆ.31: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ರೈಲ್ವೆ ನಿಲ್ದಾಣದಲ್ಲಿ ಹಳಿ ದಾಟುತ್ತಿದ್ದ ವೇಳೆ ರೈಲು ಢಿಕ್ಕಿಯಾಗಿ ಅಜ್ಜಿ ಹಾಗೂ ಇಬ್ಬರು ಮೊಮ್ಮಕ್ಕಳು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ಮೃತರನ್ನು ದೊಡ್ಡಬಳ್ಳಾಪುರ ನಗರದ ಪಾಲನಜೋಗಹಳ್ಳಿ ನಿವಾಸಿ ಇರ್ಫಾನಾ (46) ಹಾಗೂ ಅವರ ಮೊಮ್ಮಕ್ಕಳಾದ ರುಕಿಯಾ (13) ಮತ್ತು ರಾಕಿಯಾ (8) ಎಂದು ಗುರುತಿಸಲಾಗಿದೆ. ಶಾಲೆಗೆ ರಜೆ ಇದ್ದ ಹಿನ್ನೆಲೆಯಲ್ಲಿ ಹಿಂದೂಪುರದಿಂದ ಇಬ್ಬರು ಮೊಮ್ಮಕ್ಕಳು ಅಜ್ಜಿಯ ಮನೆಗೆ ಬಂದಿದ್ದರು. ಸೋಮವಾರ ಬೆಳಗ್ಗೆ ಅಜ್ಜಿಯೊಂದಿಗೆ ಊರಿಗೆ […]

News

ಸೆ. 5ರ ಸಿಜೆಪಿ ಮೆರವಣಿಗೆಯನ್ನು ನಿರ್ಬಂಧಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್! ಮೆರವಣಿಗೆಗೆ ಸಮ್ಮತಿ : ಶಾಂತಿ ಕಾನೂನು ಪಾಲನೆಗೆ ಸೂಚನೆ

ಹೊಸದಿಲ್ಲಿ, ಆ. 31: ಸೆಪ್ಟೆಂಬರ್ 5ರಂದು ದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಮೆರವಣಿಗೆಗೆ ನಿರ್ಬಂಧ ವಿಧಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ಮೆರವಣಿಗೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯಲಿದೆ ಎಂದು ಊಹಿಸಲು ಸದ್ಯ ಯಾವುದೇ ಬಲವಾದ ಕಾರಣವಿಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ತಿಳಿಸಿದ್ದಾರೆ. ಮೆರವಣಿಗೆ ಸಂದರ್ಭದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಅಧಿಕಾರಿಗಳಿಗೆ ನ್ಯಾಯಾಲಯ ಸೂಚಿಸಿದೆ. ಎಲ್ಲಾ ಕಡೆಯವರು ಶಾಂತಿಯುತವಾಗಿ, ಜವಾಬ್ದಾರಿಯುತವಾಗಿ ಹಾಗೂ ಕಾನೂನಿಗೆ ಅನುಗುಣವಾಗಿ ನಡೆದುಕೊಳ್ಳುವಂತೆ […]

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft