ಎಥನಾಲ್ ಮಿಶ್ರಿತ ಇಂಧನ ಬೇಡವಾದರೆ ಹೆಚ್ಚಿನ ಬೆಲೆ ನೀಡಿ ಶುದ್ಧ ಪೆಟ್ರೋಲ್ ಖರೀದಿಸಬಹುದು: ಕೇಂದ್ರ ಸಚಿವ ನಿತಿನ್ ಗಡ್ಕರಿ
ಹೊಸದಿಲ್ಲಿ, ಜುಲೈ 15: ತಮ್ಮ ಕುಟುಂಬಕ್ಕೆ ಲಾಭ ಮಾಡಿಕೊಡಲು ಎಥನಾಲ್ ಮಿಶ್ರಿತ ಇಂಧನ ಬಳಕೆಯನ್ನು ಉತ್ತೇಜಿಸುತ್ತಿದ್ದಾರೆ ಎಂಬ ಆರೋಪವನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ತೀವ್ರವಾಗಿ ತಳ್ಳಿಹಾಕಿದ್ದಾರೆ. ತಾನು ಮೊದಲಿನಿಂದಲೂ ದೇಶದಲ್ಲಿ ಪರ್ಯಾಯ ಇಂಧನಗಳ ಬಳಕೆಯನ್ನು ಬೆಂಬಲಿಸುತ್ತಾ ಬಂದಿರುವುದಾಗಿ ತಿಳಿಸಿರುವ ಅವರು, ಎಥನಾಲ್ ಮಿಶ್ರಿತ ಇಂಧನ ಬೇಡ ಎನ್ನುವ ಗ್ರಾಹಕರು ಹೆಚ್ಚಿನ ಬೆಲೆ ನೀಡಿ 100% ಶುದ್ಧ ಪೆಟ್ರೋಲ್ ಅನ್ನು ಖರೀದಿಸಬಹುದು ಎಂದು ಸ್ಪಷ್ಟಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ […]





