ಮುಂಬೈನಲ್ಲೊಂದು ಸಿನಿಮೀಯ ಘಟನೆ, ಆಡಿಷನ್ಗೆಂದು ಕರೆಸಿ 17 ಮಕ್ಕಳ ಕಿಡ್ನ್ಯಾಪ್..!! ಆರೋಪಿಯ ಎನ್ ಕೌಂಟರ್..!
ಮುಂಬೈ :ವೆಬ್ ಸೀರೀಸ್ಗೆ ಆಡಿಷನ್ ನಡೆಸಲಾಗುತ್ತಿದೆ ಎಂದು 17 ಮಕ್ಕಳನ್ನು ಕರೆಸಿದ್ದ ರೋಹಿತ್ ಆರ್ಯ ಎಂಬ ವ್ಯಕ್ತಿ ಮುಂಬೈನ (Mumbai) ಆರ್ಎಸ್ ಸ್ಟುಡಿಯೋದಲ್ಲಿ ಆ ಮಕ್ಕಳು ಮತ್ತು ಇನ್ನಿಬ್ಬರನ್ನು ಒತ್ತೆಯಾಳಾಗಿರಿಸಿಕೊಂಡಿದ್ದರು. ನಂತರ ಪೊಲೀಸರಿಗೆ ವಿಡಿಯೋ ಸಂದೇಶವೊಂದನ್ನು ಕಳುಹಿಸಿದ್ದರು. ಕೊನೆಗೆ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ಆ ಎಲ್ಲ ಮಕ್ಕಳನ್ನು ರಕ್ಷಿಸಿದ್ದರು. ಆದರೆ, ರೋಹಿತ್ ಆರ್ಯನ ಮೇಲೆ ಗುಂಡು ಹಾರಿಸಲಾಗಿದೆ. ಎನ್ಕೌಂಟರ್ನಲ್ಲಿ ಸಾವನ್ನಪ್ಪುವ ಮೂಲಕ ಈ ಕಿಡ್ನಾಪ್ ಡ್ರಾಮಾ ಅಂತ್ಯ ಕಂಡಿದೆ. ಮಕ್ಕಳನ್ನು ಒತ್ತೆಯಾಳಾಗಿರಿಸಿಕೊಂಡ ವಿಷಯ ತಿಳಿಯುತ್ತಿದ್ದಂತೆ ಮುಂಬೈನ ಪೊವೈ […]





