News

ಆನ್‌ಲೈನ್‌ ಗೇಮಿಂಗ್‌ ಮಸೂದೆ ಪಾಸ್‌ – ಪ್ರಚಾರ ಮಾಡಿದ್ರೂ ಜೈಲು ಶಿಕ್ಷೆ ಫಿಕ್ಸ್‌!

ನವದೆಹಲಿ: ಲೋಕಸಭೆಯಲ್ಲಿ ಆನ್‌ಲೈನ್‌ ಗೇಮಿಂಗ್‌ ಮಸೂದೆ (Online Gaming Bill, 2025) ಅಂಗೀಕಾರವಾಗಿದೆ. ವಿಪಕ್ಷಗಳ ಗದ್ದಲದ ನಡುವೆಯೂ ಈ ಮಸೂದೆಯನ್ನು ಸರ್ಕಾರ ಧ್ವನಿ ಮತದಿಂದ ಪಾಸ್‌ ಮಾಡಿಸುವಲ್ಲಿ ಯಶಸ್ವಿಯಾಗಿದೆ. ಮಾಹಿತಿ ತಂತ್ರಜ್ಞಾನ ಖಾತೆಯ ಸಚಿವ ಅಶ್ವಿನಿ ವೈಷ್ಣವ್‌ (Ashwini Vaishnaw) ಲೋಕಸಭೆಯಲ್ಲಿ ಆನ್‌ಲೈನ್ ಗೇಮಿಂಗ್ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡಿಸಿದರು. ಈ ಆಟಗಳಲ್ಲಿ ಹೆಚ್ಚುತ್ತಿರುವ ವ್ಯಸನ, ಹಣ ವರ್ಗಾವಣೆ ಮತ್ತು ಆರ್ಥಿಕ ವಂಚನೆಯ ಘಟನೆಗಳನ್ನು ತಡೆಯಲು ಮಸೂದೆ ಮಂಡಿಸಲಾಗಿದೆ ಎಂದು ಸರ್ಕಾರ ಹೇಳಿದೆ. ಈ ಮಸೂದೆಯು […]

GULF

ಅಮೆರಿಕದ ಖ್ಯಾತ ನ್ಯಾಯಾಧೀಶ ಫ್ರಾಂಕ್ ಕ್ಯಾಪ್ರಿಯೊ ನಿಧನ

ರೋಡ್ ಐಲ್ಯಾಂಡ್‌ನ ನಿವೃತ್ತ ಮುನಿಸಿಪಲ್ ನ್ಯಾಯಾಧೀಶರಾಗಿದ್ದ, ಸಾಮಾಜಿಕ ಜಾಲತಾಣಗಳಲ್ಲಿ ‘ಅಕ್ಕರೆಯ ನ್ಯಾಯಾಧೀಶ’ ಎಂದು ಜನಪ್ರಿಯರಾಗಿದ್ದ ಫ್ರಾಂಕ್ ಕ್ಯಾಪ್ರಿಯೊ (88) ಅವರು ಬುಧವಾರ (ಆಗಸ್ಟ್ 20) ಮೇದೋಜೀರಕ ಗ್ರಂಥಿಯ ಕ್ಯಾನ್ಸರ್‌ನಿಂದ ದೀರ್ಘಕಾಲದ ಹೋರಾಟದ ಬಳಿಕ ನಿಧನರಾದರು. ಅವರ ಸಹಾನುಭೂತಿಯ ನಡವಳಿಕೆ ಮತ್ತು ಮಾನವೀಯ ನ್ಯಾಯದಾನದಿಂದಾಗಿ ‘ಕಾಟ್ ಇನ್ ಪ್ರಾವಿಡೆನ್ಸ್’ ಎಂಬ ಟಿವಿ ಕಾರ್ಯಕ್ರಮದ ಮೂಲಕ ವಿಶ್ವಾದ್ಯಂತ ಖ್ಯಾತಿ ಗಳಿಸಿದ್ದರು. 1936ರಲ್ಲಿ ರೋಡ್ ಐಲ್ಯಾಂಡ್‌ನಲ್ಲಿ ಇಟಲಿ-ಅಮೆರಿಕನ್ ಕುಟುಂಬದಲ್ಲಿ ಜನಿಸಿದ ಕ್ಯಾಪ್ರಿಯೊ, ತಮ್ಮ ವೃತ್ತಿಜೀವನವನ್ನು ರೋಡ್ ಐಲ್ಯಾಂಡ್‌ನ ಮುಖ್ಯ ಮುನಿಸಿಪಲ್ ನ್ಯಾಯಾಧೀಶರಾಗಿ […]

Sports

ಶುಭ್‌ಮನ್ ಗಿಲ್ ಅಲ್ಲ, ಶ್ರೇಯಸ್ ಅಯ್ಯರ್ ಟೀಂ ಇಂಡಿಯಾ ಹೊಸ ಕ್ಯಾಪ್ಟನ್! ಇಲ್ಲಿದೆ ಬಿಗ್ ಅಪ್‌ಡೇಟ್ಸ್

ಬೆಂಗಳೂರು: ಮುಂಬರುವ ಏಷ್ಯಾಕಪ್ ಟೂರ್ನಿಯಿಂದ ಪ್ರತಿಭಾನ್ವಿತ ಬ್ಯಾಟರ್ ಶ್ರೇಯಸ್ ಅಯ್ಯರ್ ಅವರನ್ನು ಕೈಬಿಡಲಾಗಿದೆ. ಇದರ ಬೆನ್ನಲ್ಲೇ ಅಯ್ಯರ್‌ಗೆ ಗುಡ್‌ ನ್ಯೂಸ್ ನೀಡಲು ಬಿಸಿಸಿಐ ಮುಂದಾಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.  ಸೆಪ್ಟೆಂಬರ್ 09ರಿಂದ ಆರಂಭವಾಗಲಿರುವ ಏಷ್ಯಾಕಪ್ ಟೂರ್ನಿಗೆ ಈಗಾಗಲೇ ಭಾರತ ತಂಡ ಪ್ರಕಟವಾಗಿದ್ದು, ಶ್ರೇಯಸ್ ಅಯ್ಯರ್ ಅವರನ್ನು ತಂಡದಿಂದ ಕೈಬಿಟ್ಟಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕಳೆದೊಂದು ವರ್ಷದಲ್ಲಿ ಶ್ರೇಯಸ್ ಅಯ್ಯರ್ ಟಿ20 ಮಾದರಿಯಲ್ಲಿ ಅದ್ಭುತ ಲಯದಲ್ಲಿದ್ದಾರೆ. 18ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಅಯ್ಯರ್, ಪಂಜಾಬ್ ಕಿಂಗ್ಸ್ […]

News

ಬಿಎಲ್‌ ಸಂತೋಷ್‌ ವಿರುದ್ಧ ಅವಹೇಳನ – ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್‌ ವಶಕ್ಕೆ

ಮಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ (BL Santosh) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿ (Mahesh Shetty Thimarodi) ಅವರನ್ನ ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಫೇಸ್‌ಬುಕ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದ ತಿಮರೋಡಿ ಬಿಎಲ್ ಸಂತೋಷ್ ವಿರುದ್ಧ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರು. ಈ ಕುರಿತು ರಾಜೀವ್‌ ಕುಲಾಲ್‌ (Rajeev Kulal) ಅವರು ನೀಡಿದ ದೂರಿನ ಮೇರೆಗೆ ಬ್ರಹ್ಮಾವರ ಠಾಣೆಯಲ್ಲಿ BSN 196 (1), 352, 353 (2) […]

News

ಕಾನೂನಿಗಿಂತ ಯಾರೂ ದೊಡ್ಡವರಲ್ಲ’ ದರ್ಶನ್​ ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್

ಕಳೆದ ವರ್ಷ ಜೂನ್​ 11ರಂದು ದರ್ಶನ್ ಬಂಧನಕ್ಕೆ ಒಳಗಾದರು. ಆ ಬಳಿಕ ಅವರು ನಾಲ್ಕು ತಿಂಗಳಿಗೂ ಅಧಿಕ ಸಮಯ ಅವರು ಜೈಲಿನಲ್ಲಿ ಇರಬೇಕಾದ ಸ್ಥಿತಿ ಬಂದೊದಗಿತ್ತು. ಆ ಬಳಿಕ ಬೆನ್ನು ನೋವಿನ ಕಾರಣ ನೀಡಿ ಜೈಲಿನಿಂದ ಹೊರ ಬಂದರು. ಈಗ ಅವರು ಮತ್ತೆ ಜೈಲು ಸೇರಬೇಕಿದೆ. ನಟ ದರ್ಶನ್​ಗೆ (Darshan) ಬಿಗ್ ಶಾಕ್ ಎದುರಾಗಿದೆ. ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ. ಸುಪ್ರೀಂಕೋರ್ಟ್​​ನ ನ್ಯಾ.ಜೆ.ಬಿ.ಪರ್ದಿವಾಲಾ, ನ್ಯಾ.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠದಿಂದ ಈ ಆದೇಶ […]

News

ಸಚಿವ ಸ್ಥಾನಕ್ಕೆ ಕೆಎನ್‌ ರಾಜಣ್ಣ ರಾಜೀನಾಮೆ; ಅಂಗೀಕರಿಸಿದ ಸಿದ್ದರಾಮಯ್ಯ! ದಿಢೀರ್‌ ನಿರ್ಧಾರಕ್ಕೆ ಕಾರಣವೇನು?

ಸಹಕಾರ ಸಚಿವ ಕೆಎನ್‌ ರಾಜಣ್ಣ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಕಾಂಗ್ರೆಸ್‌ಗೆ ದೊಡ್ಡ ಶಾಕ್‌ ನೀಡಿದ್ದಾರೆ. ಸೋಮವಾರ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ರಾಜನಾಮೆ ಪತ್ರವನ್ನು ಅಂಗೀಕರಿಸಿದ್ದು, ರಾಜಪಾಲರಿಗೆ ಕಳುಹಿಸಿಕೊಡಲಿದ್ದಾರೆ. ಇನ್ನು ಕೆಎನ್‌ ರಾಜಣ್ಣ ಅವರ ಮುಂದಿನ ನಡೆ ಏನು? ಎಂಬ ಬಗ್ಗೆ ಕುತೂಹಲ ಹೆಚ್ಚಿದೆ. ಬೆಂಗಳೂರು: ಕೆಎನ್‌ ರಾಜಣ್ಣ ಅವರು ಸಹಕಾರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಸಿಎಂ ಸಿದ್ದರಾಮಯ್ಯ ಅಂಗೀಕರಿಸಿ ರಾಜ್ಯಪಾಲರಿಗೆ ಕಳುಹಿಸಿದ್ದಾರೆ. ಕಾಂಗ್ರೆಸ್‌ ಹೈಕಮಾಂಡ್‌ನಿಂದ ಸೂಚನೆ ಬಂದ […]

News

ಬೆಂಗಳೂರಿನಲ್ಲಿ ನಿರ್ಮಾಣವಾಗಲಿದೆ ದೇಶದ 2ನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣ

ಚಿನ್ನಸ್ವಾಮಿ ಕ್ರೀಡಾಂಗಣದ ಸಾಮರ್ಥ್ಯದ ಕೊರತೆ ಮತ್ತು ಜೂನ್ 4ರ ಕಾಲ್ತುಳಿತ ದುರಂತದ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರವು ಬೆಂಗಳೂರಿನ ಹೊರವಲಯದಲ್ಲಿ 80,000 ಆಸನಗಳ ಅತ್ಯಾಧುನಿಕ ಕ್ರೀಡಾ ಸಂಕೀರ್ಣ ನಿರ್ಮಿಸಲು ಅನುಮೋದನೆ ನೀಡಿದೆ. ಇದು ಕ್ರಿಕೆಟ್ ಸೇರಿದಂತೆ ಹಲವು ಕ್ರೀಡೆಗಳಿಗೆ ಸೌಲಭ್ಯಗಳನ್ನು ಒದಗಿಸಲಿದೆ. ಕರ್ನಾಟಕ ವಸತಿ ಮಂಡಳಿಯು ಯೋಜನೆಯನ್ನು ಕೈಗೆತ್ತಿಕೊಳ್ಳಲಿದೆ. ಕರ್ನಾಟಕದ ಕ್ರಿಕೆಟ್ ಪ್ರಿಯರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಚಿನ್ನಸ್ವಾಮಿ (M. Chinnaswamy Stadium) ಕಾಲ್ತುಳಿತ ದುರಂತದ ಬಳಿಕ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಇದೀಗ ಬೆಂಗಳೂರಿನ ಹೊರವಲಯದಲ್ಲಿ ಕ್ರೀಡಾಂಗಣ ನಿರ್ಮಿಸಲು […]

News

ಬೆಂಗಳೂರು – ಬೆಳಗಾವಿ ಸೇರಿದಂತೆ 3 ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಗ್ರೀನ್ ಸಿಗ್ನಲ್: ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ

ಬೆಂಗಳೂರು(Dreamtime.co.in): ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಬೆಂಗಳೂರು – ಬೆಳಗಾವಿ ಸೇರಿದಂತೆ 3 ವಂದೇ ಭಾರತ್ ರೈಲುಗಳಿಗೆ ಗ್ರೀನ್‌ ಸಿಗ್ನಲ್‌ ಹಾಗೂ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ ನೀಡಿದರು. ವಂದೇ ಭಾರತ್ ಗೆ ಗ್ರೀನ್ ಸಿಗ್ನಲ್ ನೀಡಿದ ಬಳಿಕ ಪ್ರಧಾನಿ ಮತ್ತು ಗಣ್ಯರು ರಸ್ತೆ ಮಾರ್ಗವಾಗಿ ಜೆ.ಪಿ. ನಗರದ ರಾಗಿಗುಡ್ಡ ಹಳದಿ ಮೆಟ್ರೋ ನಿಲ್ದಾಣದಕ್ಕೆ ತೆರಳಿದರು.ಅಲ್ಲಿ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ ಚಾಲನೆ ನೀಡುವರು.ಮೆಜೆಸ್ಟಿಕ್ ರೈಲು […]

Entertainment

ಮಲಯಾಳಂ ನಿರ್ದೇಶಕನೊಟ್ಟಿಗೆ ಸಲ್ಮಾನ್ ಖಾನ್ ಐತಿಹಾಸಿಕ ಹಿನ್ನೆಲೆಯ ಸಿನಿಮಾ

ಬಾಲಿವುಡ್​ ಖಾನ್​ಗಳು ಸಿನಿಮಾ ಯಶಸ್ಸಿಗೆ ದಕ್ಷಿಣ ಭಾರತದ ನಿರ್ದೇಶಕರನ್ನು ಆಶ್ರಯಿಸುತ್ತಿದ್ದಾರೆ. ಶಾರುಖ್ ಖಾನ್ ಈಗಾಗಲೇ ಅಟ್ಲಿ ಜೊತೆ ಸಿನಿಮಾ ಮಾಡಿ ಗೆದ್ದಿದ್ದಾರೆ. ಆಮಿರ್ ಖಾನ್ ಮುಂದಿನ ಸಿನಿಮಾ ಅನ್ನು ಲೋಕೇಶ್ ಕನಗರಾಜ್ ನಿರ್ದೇಶಿಸಲಿದ್ದಾರೆ. ಇದೀಗ ಸಲ್ಮಾನ್ ಖಾನ್, ಮಲಯಾಳಂನ ಪ್ರತಿಭಾವಂತ ನಿರ್ದೇಶಕರೊಟ್ಟಿಗೆ ಕೈ ಜೋಡಿಸಲು ಮುಂದಾಗಿದ್ದಾರೆ ಬಾಲಿವುಡ್ (Bollywood) ನಟರು ಯಶಸ್ಸಿಗಾಗಿ ದಕ್ಷಿಣ ಭಾರತ ಸಿನಿಮಾ ನಿರ್ದೇಶಕರ ಬೆನ್ನು ಬಿದ್ದಿದ್ದಾರೆ. ಶಾರುಖ್ ಖಾನ್, ಅಟ್ಲಿ ಜೊತೆ ಕೈಜೋಡಿಸಿ ‘ಜವಾನ್’ ಸಿನಿಮಾ ಮೂಲಕ ಭಾರಿ ದೊಡ್ಡ ಯಶಸ್ಸು ತಮ್ಮದಾಗಿಸಿಕೊಂಡಿದ್ದಾರೆ. […]

Business

ICICI ಬ್ಯಾಂಕ್‌ ಗ್ರಾಹಕರೇ ಅಲರ್ಟ್‌ : ಮೆಟ್ರೋ ಮತ್ತು ನಗರ ಪ್ರದೇಶಗಳಲ್ಲಿ ಮಿನಿಮಮ್ ಬ್ಯಾಲೆನ್ಸ್‌ ₹50,000ಕ್ಕೆ ಏರಿಕೆ!

ಭಾರತದ ಪ್ರಮುಖ ಖಾಸಗಿ ಬ್ಯಾಂಕ್‌ಗಳಲ್ಲಿ ಒಂದಾದ ಐಸಿಐಸಿಐ ಬ್ಯಾಂಕ್‌ ಉಳಿತಾಯ ಖಾತೆಗಳ ಮೇಲಿನ ಮಿನಿಮಮ್ ಬ್ಯಾಲೆನ್ಸ್ ಅನ್ನು ಭಾರೀ ಏರಿಕೆ ಮಾಡಿದೆ. ಮೆಟ್ರೋ ಹಾಗೂ ನಗರದ ಪ್ರದೇಶಗಳಿಗೆ ಬರೋಬ್ಬರಿ 50,000 ರೂಪಾಯಿ ಒಂದೇ ಬಾರಿಗೆ ಹೆಚ್ಚಿಸಿದೆ. ಈ ಹಿಂದೆ ಇದ್ದಿದ್ದು 10,000 ರೂಪಾಯಿ! ಭಾರತದ 2ನೇ ಅತಿ ದೊಡ್ಡ ಖಾಸಗಿ ಬ್ಯಾಂಕ್‌ ಆಗಿ ಗುರುತಿಸಿಕೊಂಡಿರುವ ಐಸಿಐಸಿಐ ಬ್ಯಾಂಕ್, ಮೆಟ್ರೋ ಮತ್ತು ನಗರ ಪ್ರದೇಶಗಳಲ್ಲಿ ಸೇವಿಂಗ್ಸ್‌ ಅಕೌಂಟ್‌ಗೆ ಕನಿಷ್ಠ ಮಾಸಿಕ ಸರಾಸರಿ ಬ್ಯಾಲೆನ್ಸ್ (MAB) ಅನ್ನು 50,000 ರೂ.ಗೆ […]

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft