News

ಸಂಜೆಯಾಗುತ್ತಿದ್ದಂತೆ ಮತ್ತೆ ಹಾರ್ಮುಝ್ ಜಲಸಂಧಿಯಲ್ಲಿ UAE ಟ್ಯಾಂಕರ್‌ಗಳ ಮೇಲೆ ದಾಳಿ: ಗಲ್ಫ್‌ ಪ್ರದೇಶದಲ್ಲಿ ಹೆಚ್ಚಿದ ಆತಂಕ

ದುಬೈ, ಆಗಸ್ಟ್ 15: ನಿನ್ನೆ ಹಾರ್ಮುಝ್ ಜಲಸಂಧಿಯಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್‌ನ ಸರ್ಕಾರಿ ಸ್ವಾಮ್ಯದ ಅಬುಧಾಬಿ ನ್ಯಾಷನಲ್ ಆಯಿಲ್ ಕಂಪನಿ (ADNOC)ಗೆ ಸೇರಿದ ಎರಡು ತೈಲ ಸಾಗಣೆ ಹಡಗುಗಳ ಮೇಲೆ ದಾಳಿ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ. ಗುರುವಾರ ಸಂಜೆ ಜಲಸಂಧಿಯ ಮೂಲಕ ಸಾಗುತ್ತಿದ್ದ ವೇಳೆ ಹಡಗುಗಳ ಮೇಲೆ ದಾಳಿ ನಡೆದಿದ್ದು, ಯಾವುದೇ ಸಿಬ್ಬಂದಿಗೆ ಗಾಯವಾಗಿಲ್ಲ ಎಂದು ADNOC ತಿಳಿಸಿದೆ. ದಾಳಿಯ ಹಿಂದೆ ಇರಾನ್ ಇದೆ ಎಂದು ಯುಎಇ ಆರೋಪಿಸಿದೆ. ಯುಎಇ ವಿದೇಶಾಂಗ ಸಚಿವಾಲಯವು ಈ ದಾಳಿಯನ್ನು ತೀವ್ರವಾಗಿ […]

News

ಚೀನಾದ ಸರಕುಗಳಿಗೆ ಭಾರತವೂ ದಾರಿ ಮಾಡಿಕೊಟ್ಟಿತೇ? 40 ದೇಶಗಳ ವಿರುದ್ಧ ಅಮೆರಿಕ ಗಂಭೀರ ಆರೋಪ

ವಾಷಿಂಗ್ಟನ್, ಆ. 14: ಅಮೆರಿಕ ವಿಧಿಸಿರುವ ಹೆಚ್ಚಿನ ಆಮದು ಸುಂಕದಿಂದ ತಪ್ಪಿಸಿಕೊಳ್ಳಲು ಚೀನಾ ತನ್ನ ಸರಕುಗಳನ್ನು ಮೂರನೇ ದೇಶಗಳ ಮೂಲಕ ಅಮೆರಿಕಕ್ಕೆ ಕಳುಹಿಸುತ್ತಿದೆ ಎಂದು ಅಮೆರಿಕ ಆರೋಪಿಸಿದೆ. ಈ ರೀತಿಯ ಸರಕು ಸಾಗಣೆಗೆ ಭಾರತ ಸೇರಿದಂತೆ 40ಕ್ಕೂ ಹೆಚ್ಚು ದೇಶಗಳು ನೆರವಾಗುತ್ತಿವೆ ಎಂದು ಶ್ವೇತಭವನ ಬಿಡುಗಡೆ ಮಾಡಿರುವ ವರದಿ ಹೇಳಿದೆ. ಸರಳವಾಗಿ ಹೇಳುವುದಾದರೆ, ಚೀನಾದಲ್ಲಿ ತಯಾರಾದ ವಸ್ತುಗಳನ್ನು ನೇರವಾಗಿ ಅಮೆರಿಕಕ್ಕೆ ಕಳುಹಿಸುವ ಬದಲು, ಬೇರೆ ದೇಶಕ್ಕೆ ಕಳುಹಿಸಿ ಅಲ್ಲಿಂದ ಅಮೆರಿಕಕ್ಕೆ ರಫ್ತು ಮಾಡುವ ಮೂಲಕ ಸರಕುಗಳ ಮೂಲ […]

Health + News

ಕ್ಯಾನ್ಸರ್ ಕಾರಕ ರಾಸಾಯನಿಕದ ವಿವಾದ: ಭಾರತದ ಆಹಾರ ರಫ್ತಿನ ಗುಣಮಟ್ಟದ ಬಗ್ಗೆ ಹೆಚ್ಚಿದ ಆತಂಕ

ಹೊಸದಿಲ್ಲಿ: ಭಾರತೀಯ ಆಹಾರ ಉತ್ಪನ್ನಗಳಲ್ಲಿ ಕ್ಯಾನ್ಸರ್ ಕಾರಕ ಎಂದು ವರ್ಗೀಕರಿಸಲಾದ ಎಥಿಲೀನ್ ಆಕ್ಸೈಡ್ ಪತ್ತೆಯಾಗಿರುವ ಪ್ರಕರಣಗಳು ದೇಶದ ಆಹಾರ ಸುರಕ್ಷತೆ ಹಾಗೂ ರಫ್ತು ಗುಣಮಟ್ಟದ ಬಗ್ಗೆ ಮತ್ತೊಮ್ಮೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿವೆ. ಈ ಹಿನ್ನೆಲೆಯಲ್ಲಿ ಜಪಾನ್, ಅಮೆರಿಕ ಸೇರಿದಂತೆ ಹಲವು ರಾಷ್ಟ್ರಗಳ ಕಟ್ಟುನಿಟ್ಟಿನ ಆಹಾರ ಸುರಕ್ಷತಾ ಮಾನದಂಡಗಳು ಭಾರತೀಯ ಉತ್ಪನ್ನಗಳ ರಫ್ತು ಮಾರುಕಟ್ಟೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಕುರಿತು ಚರ್ಚೆ ತೀವ್ರಗೊಂಡಿದೆ. ಎಥಿಲೀನ್ ಆಕ್ಸೈಡ್ ಅನ್ನು ಅಂತರರಾಷ್ಟ್ರೀಯ ಕ್ಯಾನ್ಸರ್ ಸಂಶೋಧನಾ ಸಂಸ್ಥೆ ಕ್ಯಾನ್ಸರ್ ಕಾರಕವೆಂದು ವರ್ಗೀಕರಿಸಿದೆ. […]

News

ಭಾರತದ ಆರ್ಥಿಕ ಶಕ್ತಿಗೆ ಹೊಸ ಗುರಿ: ವಿಶ್ವದ ಮುಂಚೂಣಿ ಆರ್ಥಿಕತೆಯಾಗಲಿದೆ ಭಾರತ ಎಂದ ಪ್ರಧಾನಿ ಮೋದಿ

ಹೊಸದಿಲ್ಲಿ, ಆಗಸ್ಟ್ 15: ಭಾರತವು ಕಳೆದ 12 ವರ್ಷಗಳಲ್ಲಿ ‘Fragile Five’ ಆರ್ಥಿಕತೆಗಳ ಪಟ್ಟಿಯಿಂದ ಹೊರಬಂದು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ ಹೊರಹೊಮ್ಮಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೇಶವು ಮುಂದಿನ ದಿನಗಳಲ್ಲಿ ವಿಶ್ವದ ಮುಂಚೂಣಿ ಆರ್ಥಿಕ ಶಕ್ತಿಯಾಗಿ ರೂಪುಗೊಳ್ಳುವ ಗುರಿಯೊಂದಿಗೆ ಮುನ್ನಡೆಯುತ್ತಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕೆಂಪುಕೋಟೆಯಲ್ಲಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಭಾರತದ ಆರ್ಥಿಕ ಬೆಳವಣಿಗೆಗೆ ದೇಶದ ಜನರ ಪರಿಶ್ರಮವೇ ಪ್ರಮುಖ ಕಾರಣ ಎಂದು […]

Sports

ಜೆಮಿಮಾ ರೊಡ್ರಿಗ್ಸ್‌ಗೆ ಗಾಯದ ಆಘಾತ: ಏಷ್ಯಾ ಕಪ್, ಏಷ್ಯನ್ ಗೇಮ್ಸ್‌ನಿಂದ ಹೊರಗುಳಿದ ಸ್ಟಾರ್ ಆಟಗಾರ್ತಿ

ನವದೆಹಲಿ, ಆಗಸ್ಟ್ 15: ಭಾರತ ಮಹಿಳಾ ಕ್ರಿಕೆಟ್ ತಂಡಕ್ಕೆ ಭಾರಿ ಹಿನ್ನಡೆಯಾಗಿದ್ದು, ಪ್ರಮುಖ ಬ್ಯಾಟರ್ ಜೆಮಿಮಾ ರೊಡ್ರಿಗ್ಸ್ ಬಲ ತೊಡೆಯ ಹ್ಯಾಮ್‌ಸ್ಟ್ರಿಂಗ್‌ನಲ್ಲಿ ಉಂಟಾದ ಗಂಭೀರ ಗಾಯದ ಹಿನ್ನೆಲೆಯಲ್ಲಿ ಮುಂಬರುವ ಮಹಿಳಾ ಏಷ್ಯಾ ಕಪ್ ಹಾಗೂ ಏಷ್ಯನ್ ಗೇಮ್ಸ್‌ನಿಂದ ಹೊರಗುಳಿದಿದ್ದಾರೆ. ಆಗಸ್ಟ್ 3ರಂದು ಇಂಗ್ಲೆಂಡ್‌ನಲ್ಲಿ ನಡೆಯುತ್ತಿದ್ದ ‘ದಿ ಹಂಡ್ರೆಡ್’ ಟೂರ್ನಿಯಲ್ಲಿ ಸದರ್ನ್ ಬ್ರೇವ್ ಪರ ಆಡುತ್ತಿದ್ದ ವೇಳೆ ಜೆಮಿಮಾ ಗಾಯಗೊಂಡಿದ್ದರು. ಬೆಂಗಳೂರಿನ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ಬಿಸಿಸಿಐ ವೈದ್ಯಕೀಯ ತಂಡ ನಡೆಸಿದ ವೈದ್ಯಕೀಯ ಪರೀಕ್ಷೆಯಲ್ಲಿ ಜೆಮಿಮಾಗೆ ‘ಹೈ-ಗ್ರೇಡ್’ ಬಲ […]

News

ಬಾಗಲಕೋಟೆ ಕಾರು ಬ್ಲಾಸ್ಟ್ ಘಟನೆಯಲ್ಲಿ ಆಘಾತಕಾರಿ ತಿರುವು! : ಹಣದ ವಿವಾದಕ್ಕೆ ಕೊಲೆ ಸಂಚು! ಎಸ್ಪಿ ಸ್ಪಷ್ಟನೆ

ಬಾಗಲಕೋಟೆ, ಆ.14: ಬಾಗಲಕೋಟೆಯಲ್ಲಿ ಜುಲೈ 25ರಂದು ನಡೆದಿದ್ದ ಕಾರು ಸ್ಫೋಟ ಪ್ರಕರಣಕ್ಕೆ ಇದೀಗ ಮಹತ್ವದ ತಿರುವು ಸಿಕ್ಕಿದೆ. ಹಣಕಾಸಿನ ವಿವಾದದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡುವ ಉದ್ದೇಶದಿಂದಲೇ ಕಾರಿನಲ್ಲಿ ಸ್ಫೋಟಕ ಇರಿಸಲಾಗಿತ್ತು ಎಂಬುದು ಪೊಲೀಸ್ ತನಿಖೆಯಿಂದ ಬಹಿರಂಗವಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಜುಲೈ 25ರಂದು ರಾತ್ರಿ 10.45ರ ಸುಮಾರಿಗೆ ಕಾರು ಸ್ಫೋಟಗೊಂಡ ಬಳಿಕ ಬಾಂಬ್ ನಿಷ್ಕ್ರಿಯ ದಳ ಹಾಗೂ ಎಫ್‌ಎಸ್‌ಎಲ್ ತಂಡ ಪರಿಶೀಲನೆ ನಡೆಸಿತ್ತು. ಎಫ್‌ಎಸ್‌ಎಲ್‌ನ ಪ್ರಾಥಮಿಕ […]

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft