ನಿನ್ನೆ 7 ಅಮಾಯಕ ಕಾರ್ಮಿಕರನ್ನು ಬಲಿ ಪಡೆದ ಉತ್ತರಾಖಂಡ ಸುರಂಗ ದುರಂತಕ್ಕೆ ಬಿಜೆಪಿ ಸರ್ಕಾರದ ನಿರ್ಲಕ್ಷ್ಯವೇ ಕಾರಣ? : ಗಂಭೀರ ಆರೋಪ!
ಡೆಹ್ರಾಡೂನ್, ಆ.14: ಉತ್ತರಾಖಂಡದ ಚಮೋಲಿ ಜಿಲ್ಲೆಯ ಪಿಪಲ್ಕೋಟಿ ಬಳಿಯ ಮಾಯಾಪುರದಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಯ ಸುರಂಗಕ್ಕೆ ಏಕಾಏಕಿ ನೀರು ಮತ್ತು ಅವಶೇಷಗಳು ನುಗ್ಗಿ ಸಂಭವಿಸಿದ ಭೀಕರ ದುರಂತದಲ್ಲಿ ಏಳು ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 22 ಕಾರ್ಮಿಕರು ಸುರಂಗದೊಳಗೆ ಸಿಲುಕಿಕೊಂಡಿದ್ದು, 14 ಮಂದಿಯನ್ನು ರಕ್ಷಿಸಲಾಗಿದೆ. ಇನ್ನೂ ನಾಪತ್ತೆಯಾಗಿರುವ ಕಾರ್ಮಿಕರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಗುರುವಾರ ಸಂಜೆ ಸುಮಾರು 7.05ರ ವೇಳೆಗೆ ಸುರಂಗದ ಮೇಲ್ಭಾಗದಲ್ಲಿ ಭೂಕುಸಿತ ಸಂಭವಿಸಿ, ಸುಮಾರು 1.4 ಕಿ.ಮೀ. ದೂರದಲ್ಲಿ ಗುಂಡಿಯೊಂದು ನಿರ್ಮಾಣವಾಗಿದ್ದು, ಅದರ ಮೂಲಕ […]







