News

ಹಿಂದೂ, ಮುಸ್ಲಿಂ, ಕ್ರೈಸ್ತರೆಲ್ಲ ಒಂದಾಗಿ ಬಾಂಗ್ಲಾದೇಶ ಜನತೆ ಏಕತೆಯಿಂದ ಇರೋಣ:

ಬೆಂಗಳೂರು : ಹಿಂದೂ, ಮುಸ್ಲಿಂ, ಕ್ರೈಸ್ತರೆಲ್ಲ ಒಂದಾಗಿ ಬಾಂಗ್ಲಾದೇಶ ಜನತೆ ಏಕತೆಯಿಂದ ಇರೋಣ: 16 ವರ್ಷಗಳ ನಂತರ ಬಾಂಗ್ಲಾಕೆ ಮರಳಿ ಬಂದ ರಾಷ್ಟ್ರೀಯವಾದಿ ಪಕ್ಷದ ಹಂಗಾಮಿ ಅಧ್ಯಕ್ಷ ತಾರಿಕ್‌ ರೆಹಮಾನ್‌ ಕರೆ

News

ಬಿಕ್ಲು ಶಿವ ಕೊಲೆ ಪ್ರಕರಣ: ಬಿಜೆಪಿ ಶಾಸಕ ಬೈರತಿ ಬಸವರಾಜ್​​ಗೆ ರಿಲೀಫ್​, ಬಂಧನದಿಂದ ಪಾರು

ಬೆಂಗಳೂರಿನ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ಭೀತಿ ಎದುರಿಸುತ್ತಿದ್ದ ಬಿಜೆಪಿ ಶಾಸಕ ಬೈರತಿ ಬಸವರಾಜ್​​ಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಜಾಮೀನು ರದ್ದಾಗಿದ್ದರಿಂದ ಹಲವು ದಿನಗಳಿಂದ ತಲೆಮರೆಸಿಕೊಂಡಿರುವ ಕೆಆರ್ ಪುರಂ ಶಾಸಕ ಬೈರತಿ ಬಸವರಾಜ್ ಸದ್ಯಕ್ಕೆ ಬಂಧನದಿಂದ ಪಾರಾಗಿದ್ದಾರೆ. ಬೆಂಗಳೂರು, (ಡಿಸೆಂಬರ್ 26): ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ (Biklu Shiva Murder Case) ಸಂಬಂಧಿಸಿದಂತೆ ಬಂಧನದ ಭೀತಿ ಎದುರಿಸುತ್ತಿದ್ದ ಬಿಜೆಪಿ ಶಾಸಕ ಬೈರತಿ ಬಸವರಾಜ್​​ಗೆ (Byrathi Basavaraj) ಮಧ್ಯಂತರ ಜಾಮೀನು ಸಿಕ್ಕಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್​​ ಜಾಮೀನು ಅರ್ಜಿ […]

News Sports

Vaibhav Suryavanshi: ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ

ಕೇವಲ 14 ವರ್ಷ ವಯಸ್ಸಿನಲ್ಲೇ ಕ್ರಿಕೆಟ್‌ ಲೋಕದಲ್ಲಿ ಸಂಚಲನ ಸೃಷ್ಟಿಸಿರುವ ವೈಭವ್ ಸೂರ್ಯವಂಶಿ ತಮ್ಮ ವೃತ್ತಿಜೀವನದ ಆರಂಭದ ಹಂತದಲ್ಲೇ ಹಲವಾರು ದಾಖಲೆಗಳನ್ನು ನಿರ್ಮಿಸಿದ್ದಾರೆ. ಐಪಿಎಲ್‌ನಲ್ಲಿ ಅತಿ ವೇಗದ ಅರ್ಧಶತಕ ಸಿಡಿಸಿದ ಕಿರಿಯನೆಂಬ ದಾಖಲೆಯಿಂದ ಹಿಡಿದು, ಇಂಗ್ಲೆಂಡ್‌, ಆಸ್ಟ್ರೇಲಿಯಾದಲ್ಲೂ ವೈಭವ್ ಆರ್ಭಟ ಜೋರಿತ್ತು. ಸಿಕ್ಕ ಅವಕಾಶಗಳನ್ನು ಎರಡು ಕೈಗಳಿಂದ ಬಾಚಿಕೊಂಡಿರುವ ವೈಭವ್​ಗೆ ಇದೀಗ ಭಾರತ ಸರ್ಕಾರದಿಂದಲೂ ಮನ್ನಣೆ ಸಿಕ್ಕಿದೆ. ವೈಭವ್ ಸೂರ್ಯವಂಶಿ ಅವರಿಗೆ ದೇಶದ ಅತ್ಯುನ್ನತ ಮಕ್ಕಳ ಪ್ರಶಸ್ತಿಯಾದ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರವನ್ನು, ರಾಷ್ಟ್ರಪತಿ ದ್ರೌಪದಿ […]

GULF News

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು, 20 ಮಂದಿಗೆ ಗಾಯ

ನವದೆಹಲಿ, ಡಿಸೆಂಬರ್ 26: ಸಿರಿಯಾದ ಹೋಮ್ಸ್ ಮಸೀದಿಯಲ್ಲಿ ಇಂದು ಪ್ರಾರ್ಥನೆಯ ಸಮಯದಲ್ಲಿ ಸಂಭವಿಸಿದ ಸ್ಫೋಟದಲ್ಲಿ (Syria Blast) 8 ಜನರು ಸಾವನ್ನಪ್ಪಿದ್ದಾರೆ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮಧ್ಯ ಸಿರಿಯಾದ ಹೋಮ್ಸ್ ನಗರದಲ್ಲಿರುವ ಇಮಾಮ್ ಅಲಿ ಬಿನ್ ಅಬಿ ತಾಲಿಬ್ ಮಸೀದಿಯಲ್ಲಿ ಸ್ಫೋಟ ಸಂಭವಿಸಿ 8 ಜನರು ಸಾವನ್ನಪ್ಪಿದ್ದಾರೆ. ಸರ್ಕಾರಿ ನಿಯಂತ್ರಿತ ಜಿಲ್ಲೆಯಾದ ವಾಡಿ ಅಲ್-ದಹಾಬ್ ನೆರೆಹೊರೆಯಲ್ಲಿರುವ ಮಸೀದಿಯೊಳಗೆ ಸ್ಫೋಟ ಸಂಭವಿಸಿದೆ ಎಂದು ಸಿರಿಯನ್ ಅರಬ್ ಸುದ್ದಿ ಸಂಸ್ಥೆ (SANA) ವರದಿ ಮಾಡಿದೆ. ಗಾಯಾಳುಗಳನ್ನು ಸ್ಥಳಾಂತರಿಸಲು ಮತ್ತು […]

Business

ಅಮೆರಿಕದೊಂದಿಗೆ ಟ್ರೇಡ್ ಡೀಲ್; ಅಂತಿಮ ಪ್ರಸ್ತಾಪ ಸಲ್ಲಿಸಿದ ಭಾರತ; ಕೃಷಿ ತಂಟೆ ಬೇಡ, ಟ್ಯಾರಿಫ್ ನಿಲ್ಲಿಸಿ ಎಂಬುದು ಭಾರತದ ಬೇಡಿಕೆ

India tables final trade proposal to US: ಭಾರತ ಮತ್ತು ಅಮೆರಿಕ ನಡುವೆ ವ್ಯಾಪಾರ ಒಪ್ಪಂದ ತಾರ್ಕಿಕ ಅಂತ್ಯ ಕಾಣಬಹುದು. ಭಾರತ ತನ್ನ ಅಂತಿಮ ಪ್ರಸ್ತಾಪವನ್ನು ಮುಂದಿಟ್ಟಿದೆ. ಟ್ಯಾರಿಫ್ ಅನ್ನು ಶೇ. 15ಕ್ಕೆ ಇಳಿಸಬೇಕು, ಕೃಷಿ ಕ್ಷೇತ್ರವನ್ನು ಒಪ್ಪಂದದಿಂದ ಹೊರಗಿಡಬೇಕು ಎಂಬುದು ಭಾರತ ಮಾಡಿರುವ ಎರಡು ಪ್ರಮುಖ ಬೇಡಿಕೆಗಳು. ಅಮೆರಿಕವೇನಾದರೂ ಸಕಾರಾತ್ಮಕವಾಗಿ ಸ್ಪಂದಿಸಿದರೆ ಮುಂದಿನ ವರ್ಷವೇ ಒಪ್ಪಂದಕ್ಕೆ ಸಹಿಬೀಳುವ ನಿರೀಕ್ಷೆ ಇದೆ. ನವದೆಹಲಿ, ಡಿಸೆಂಬರ್ 26: ಭಾರತ ಹಾಗೂ ಅಮೆರಿಕ ನಡುವೆ ವ್ಯಾಪಾರ ಒಪ್ಪಂದಕ್ಕಾಗಿ (India US […]

Technology

ಇಸ್ರೋದ ಐತಿಹಾಸಿಕ ಸಾಧನೆ: LVM3 ರಾಕೆಟ್ ಮೂಲಕ ‘ಬ್ಲೂಬರ್ಡ್ ಬ್ಲಾಕ್-2’ ಉಪಗ್ರಹ ಯಶಸ್ವಿ ಉಡಾವಣೆ; ಕುಗ್ರಾಮಗಳು, ಮಲೆನಾಡು ಪ್ರದೇಶಗಳಿಗೆ ತಡೆರಹಿತ 5G

ಟೆಕ್ ಸಮಾಚಾರ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ISRO) ಇಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ತನ್ನ ಅತ್ಯಂತ ಬಲಿಷ್ಠ ರಾಕೆಟ್ ಎನಿಸಿಕೊಂಡಿರುವ LVM3 ಮೂಲಕ ಬೃಹತ್ ಸಂವಹನ ಉಪಗ್ರಹ ‘ಬ್ಲೂಬರ್ಡ್ ಬ್ಲಾಕ್-2’ ಅನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ. ಈ ಅತ್ಯಾಧುನಿಕ ಉಪಗ್ರಹವು ಬಾಹ್ಯಾಕಾಶದಿಂದ ನೇರವಾಗಿ ಮೊಬೈಲ್ ಫೋನ್‌ಗಳಿಗೆ ಹೈ-ಸ್ಪೀಡ್ ಇಂಟರ್ನೆಟ್ ಸಂಪರ್ಕವನ್ನು ನೀಡುವ ಸಾಮರ್ಥ್ಯ ಹೊಂದಿದ್ದು, ಇದು ಭಾರತದ ದೂರಸಂಪರ್ಕ ಮತ್ತು ಇಂಟರ್ನೆಟ್ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ನಾಂದಿ […]

Business GULF

ಭಾರತ – ಒಮಾನ್ ಮುಕ್ತ ವ್ಯಾಪಾರ ಒಪ್ಪಂದ: ಆರ್ಥಿಕ ಪ್ರಗತಿಯ ಹೊಸ ಮನ್ವಂತರ

ಭಾರತ ಮತ್ತು ಒಮಾನ್ ಸುಲ್ತಾನೇಟ್ ನಡುವೆ ಇತ್ತೀಚೆಗೆ ಏರ್ಪಟ್ಟಿರುವ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದವು (CEPA) ಉಭಯ ದೇಶಗಳ ವಾಣಿಜ್ಯ ಇತಿಹಾಸದಲ್ಲಿ ಒಂದು ಐತಿಹಾಸಿಕ ಮೈಲಿಗಲ್ಲಾಗಿದೆ. ಈ ಒಪ್ಪಂದದ ಅನ್ವಯ, ಒಮಾನ್ ದೇಶವು ಭಾರತದ ಸುಮಾರು ಶೇ. 98ಕ್ಕಿಂತಲೂ ಹೆಚ್ಚಿನ ರಫ್ತು ಉತ್ಪನ್ನಗಳಿಗೆ ತನ್ನ ಮಾರುಕಟ್ಟೆಯಲ್ಲಿ ಶೂನ್ಯ ಸುಂಕದ ಪ್ರವೇಶವನ್ನು ಕಲ್ಪಿಸಿಕೊಟ್ಟಿದೆ. ಇದರಿಂದಾಗಿ ಭಾರತದ ಪ್ರಮುಖ ಉತ್ಪನ್ನಗಳಾದ ಜವಳಿ, ಕೃಷಿ ಪದಾರ್ಥಗಳು, ರತ್ನ ಮತ್ತು ಆಭರಣಗಳು ಹಾಗೂ ಫಾರ್ಮಾಸ್ಯುಟಿಕಲ್ಸ್ ಕ್ಷೇತ್ರಗಳಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಮಾರುಕಟ್ಟೆ ಲಭ್ಯವಾಗಲಿದೆ. […]

Entertainment ಸಿನಿಮಾ

2 ಕೋಟಿಯಿಂದ 21 ಕೋಟಿ ರೂಪಾಯಿಗೆ ಏರಿಕೆ ಆಯ್ತು ಅಕ್ಷಯ್ ಖನ್ನಾ ಸಂಬಳ

‘ಧುರಂಧರ್’ ಚಿತ್ರದಲ್ಲಿ ರೆಹಮಾನ್ ಡಕಾಯಿತ್ ಪಾತ್ರ ಮಾಡಿದ ಅಕ್ಷಯ್ ಖನ್ನಾ ಅವರಿಗೆ ಈಗ ಫುಲ್ ಡಿಮ್ಯಾಂಡ್. ಮುಂದಿನ ಸಿನಿಮಾಗೆ ಅವರು ಬರೋಬ್ಬರಿ 21 ಕೋಟಿ ರೂಪಾಯಿ ಸಂಭಾವನೆ ಕೇಳುತ್ತಿದ್ದಾರೆ ಎನ್ನಲಾಗಿದೆ. ಸಂಭಾವನೆ ವಿಚಾರದಲ್ಲಿ ಒಮ್ಮತ ಮೂಡದ ಕಾರಣದಿಂದ ಅವರು ‘ದೃಶ್ಯಂ 3’ ಚಿತ್ರವನ್ನು ಕೈಬಿಟ್ಟಿದ್ದಾರೆ. ಈ ವರ್ಷ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಸಿನಿಮಾ ಎಂಬ ಖ್ಯಾತಿಗೆ ‘ಧುರಂಧರ್’ (Dhurandhar) ಚಿತ್ರ ಪಾತ್ರವಾಗಿದೆ. ಈ ಸಿನಿಮಾದಲ್ಲಿ ನಟಿಸಿದ ಎಲ್ಲ ಕಲಾವಿದರೂ ಹೈಲೈಟ್ ಆಗಿದ್ದಾರೆ. ಹೀರೋ ಆಗಿ ರಣವೀರ್ ಸಿಂಗ್ ಅವರು […]

News

ರಾಜ್ಯದ ಆಂತರಿಕ ಕಚ್ಚಾಟ ಕಾಂಗ್ರೆಸ್‌ ಹೈಕಮಾಂಡ್ ಸರಿಪಡಿಸಲಿ: ಸತೀಶ್‌ ಜಾರಕಿಹೊಳಿ

ಬೆಂಗಳೂರು : ರಾಜ್ಯದ ಆಂತರಿಕ ಕಚ್ಚಾಟ ಕಾಂಗ್ರೆಸ್‌ ಹೈಕಮಾಂಡ್ ಸರಿಪಡಿಸಲಿ: ಸತೀಶ್‌ ಜಾರಕಿಹೊಳಿ ಬೆಂಗಳೂರಿನಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ, “ಬರುವ ಚುನಾವಣೆಗಳಲ್ಲಿ ಸರ್ಕಾರದ ಆಂತರಿಕ ಗೊಂದಲ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ. ಹೈಕಮಾಂಡ್‌ನವರು ಇದನ್ನು ಸರಿಪಡಿಸುವ ಕೆಲಸ ಮಾಡಬೇಕು, ಇಲ್ಲದಿದ್ದರೆ ಕಷ್ಟವಾಗಲಿದೆ” ಎಂದಿದ್ದಾರೆ.

News

ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟು ನಿಯಮ ಮುರಿದ ಕಾವ್ಯಾ ಸಹೋದರ!

ಬೆಂಗಳೂರು : ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟು ನಿಯಮ ಮುರಿದ ಕಾವ್ಯಾ ಸಹೋದರ!ತಕ್ಷಣವೇ ಕಾವ್ಯಾ ಕುಟುಂಬವನ್ನು ಹೊರ ನಡೆಯಲು ಬಿಗ್ ಬಾಸ್ ಆದೇಶ!ಕುಟುಂಬದೊಂದಿಗೆ ಕಳೆಯುವ ಅವಕಾಶವನ್ನು ಕಳೆದುಕೊಂಡು ಕಣ್ಣೀರು ಹಾಕಿದ ಕಾವ್ಯಾ!

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft