ವೈಭವ್ ಸೂರ್ಯವಂಶಿ ಕುರಿತು ಅತಿಯಾದ ನಿರೀಕ್ಷೆ ಬೇಡ: ಹಿರಿಯ ಕ್ರಿಕೆಟಿಗ ಕಪಿಲ್ ದೇವ್ ಕಿವಿಮಾತು
ಹೊಸದಿಲ್ಲಿ, ಜೂನ್ ೦೯: ಭಾರತ ಕ್ರಿಕೆಟ್ ತಂಡಕ್ಕೆ ಕೇವಲ 15ನೇ ವಯಸ್ಸಿನಲ್ಲೇ ಪದಾರ್ಪಣೆ ಮಾಡುವ ಅಪರೂಪದ ಅವಕಾಶವನ್ನು ಗಿಟ್ಟಿಸಿಕೊಂಡಿರುವ ಯುವ ಕ್ರಿಕೆಟ್ ಪ್ರತಿಭೆ ವೈಭವ್ ಸೂರ್ಯವಂಶಿ ಅವರ ವಿಚಾರದಲ್ಲಿ ಸಾರ್ವಜನಿಕರು ಮತ್ತು ಅಭಿಮಾನಿಗಳು ತಾಳ್ಮೆಯಿಂದ ಇರಬೇಕು ಎಂದು ಭಾರತ ತಂಡದ ಮಾಜಿ ನಾಯಕ ಹಾಗೂ ಹಿರಿಯ ಆಟಗಾರ ಕಪಿಲ್ ದೇವ್ ಸಲಹೆ ನೀಡಿದ್ದಾರೆ. ವೃತ್ತಿಜೀವನದ ತೀರಾ ಆರಂಭಿಕ ಹಂತದಲ್ಲೇ ಆಟಗಾರನ ಮೇಲೆ ದೊಡ್ಡ ಮಟ್ಟದ ನಿರೀಕ್ಷೆಗಳ ಭಾರವನ್ನು ಹೇರುವುದು ಸೂಕ್ತವಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಇತ್ತೀಚೆಗಷ್ಟೇ ಅತ್ಯಂತ […]









