ಬ್ಯಾರಿ ಸೆಂಟ್ರಲ್ ಕಮಿಟಿಯ ನೂತನ ಕಛೇರಿ ಉದ್ಘಾಟನಾ ಸಮಾರಂಭದಲ್ಲಿ ಸ್ಪೀಕರ್ರವರಿಂದ ಬ್ಯಾರಿಗಳಿಗೆ ಸಿಹಿಸುದ್ದಿ: ಬೆಂಗಳೂರಿನಲ್ಲಿ ಶೀಘ್ರದಲ್ಲೇ ‘ಬ್ಯಾರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ’ ಆರಂಭ..!!
ಬೆಂಗಳೂರು : ನಿನ್ನೆ (ಮಂಗಳವಾರ)ಸಂಜೆ ಮೆಜೆಸ್ಟಿಕ್ ನಲ್ಲಿ (ಬಿಸಿಸಿ) ಬ್ಯಾರಿ ಸೆಂಟ್ರಲ್ ಕಮಿಟಿಯ ನೂತನ ಕಛೇರಿಯನ್ನು ಉದ್ಘಾಟನೆಗೈದ ಸ್ಪೀಕರ್ ಯು ಟಿ ಖಾದರ್ ರವರು ಹಲವು ಮಾತುಗಳನ್ನಾಡಿದರು. ಬೆಂಗಳೂರಿನಲ್ಲಿರುವ ಬ್ಯಾರಿಗಳ ಅಭಿವೃದ್ಧಿಗಾಗಿ ಬೆಂಗಳೂರಿನಲ್ಲಿ ಶೀಘ್ರದಲ್ಲೇ ‘ಬ್ಯಾರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ’ ಆರಂಭವಾಗಲಿದೆ ಎಂಬ ಸಿಹಿ ಸುದ್ದಿಯನ್ನು ನೀಡಿದರು. ಮಂಗಳವಾರ ಸಂಜೆ ಬೆಂಗಳೂರಿನ ಮೆಜೆಸ್ಟಿಕ್ನಲ್ಲಿರುವ ಹಿಂದೂಸ್ತಾನ್ ಕಾಂಪ್ಲೆಕ್ಲ್ನಲ್ಲಿ ಬ್ಯಾರಿಸ್ ಸೆಂಟ್ರಲ್ ಕಮಿಟಿ(ಬಿಸಿಸಿ)ಯ ನೂತನ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ಕರಾವಳಿಯ ಬ್ಯಾರಿ ಸಮುದಾಯದ ಮಂದಿ ಸ್ವಾಭಿಮಾನದ ಬದುಕನ್ನು ರೂಪಿಸಿಕೊಳ್ಳುವವರು. ಇತ್ತೀಚಿನ […]





