ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿ: ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು ಸಿಗುತ್ತಿರುವುದಕ್ಕೆ ಹೈಕೋರ್ಟ್ ತೀವ್ರ ಕಳವಳ; ಯುಪಿ ಸಿಎಂ ಮಧ್ಯಪ್ರವೇಶಕ್ಕೆ ಸೂಚನೆ
ಅಲಹಾಬಾದ್, ಜೂನ್ 4: ಉತ್ತರ ಪ್ರದೇಶದ ವಿಧಿವಿಜ್ಞಾನ ಪ್ರಯೋಗಾಲಯಗಳ (FSL) ಅಪೂರ್ಣ ಮೂಲಸೌಕರ್ಯ, ಸಿಬ್ಬಂದಿ ಕೊರತೆ ಮತ್ತು ಹಳೆಯ ತಂತ್ರಜ್ಞಾನ ಹಾಗೂ ಯಂತ್ರೋಪಕರಣಗಳಿಂದಾಗಿ ಅತ್ಯಾಚಾರ ಮತ್ತು ಕೊಲೆಯಂತಹ ಘೋರ ಅಪರಾಧ ಪ್ರಕರಣಗಳ ಆರೋಪಿಗಳಿಗೂ ಸುಲಭವಾಗಿ ಜಾಮೀನು ಸಿಗುವಂತಹ ಆತಂಕಕಾರಿ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಲಹಾಬಾದ್ ಹೈಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ. ಸೂಕ್ತ ವೈಜ್ಞಾನಿಕ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಆರೋಪಿಗಳು ಕಾನೂನಿನ ಕಣ್ಣಿನಿಂದ ತಪ್ಪಿಸಿಕೊಳ್ಳುತ್ತಿರುವುದನ್ನು ತಡೆಯಲು ರಾಜ್ಯ ಸರ್ಕಾರ ತಕ್ಷಣವೇ ಎಚ್ಚೆತ್ತುಕೊಳ್ಳಬೇಕು ಎಂದು ನ್ಯಾಯಾಲಯ ಹೇಳಿದೆ. ಈ ಗಂಭೀರ ಮತ್ತು […]








