ಶೃಂಗೇರಿಯಲ್ಲೊಂದು ದುರ್ಘಟನೆ!! ಇಬ್ಬರನ್ನು ತುಳಿದು ಕೊಂದ ಕಾಡಾನೆ!!
ಚಿಕ್ಕಮಗಳೂರು: ದನದ ಕೊಟ್ಟಿಗೆಗೆ ಎಲೆಯನ್ನು ತರಲು ಕಾಡಿಗೆ ಹೋದ ಇಬ್ಬರನ್ನು ಕಾಡಾನೆ ದಾಳಿ ಮಾಡಿ ತುಳಿದು ಕೊಂದ ಘಟನೆ ಶೃಂಗೇರಿಯಲ್ಲಿ ನಡೆದಿದೆ. ಮೃತರನ್ನು ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಹೊರವಲಯದಲ್ಲಿರುವ ಹಳ್ಳಿಯ ನಿವಾಸಿಗಳಾದ ಉಮೇಶ್ (43) ಮತ್ತು ಹರೀಶ್ (42) ಎಂದು ಗುರುತಿಸಲಾಗಿದೆ. ಶುಕ್ರವಾರ ಕಾಡು ಆನೆಯೊಂದು ಇಬ್ಬರು ಪುರುಷರನ್ನು ತುಳಿದು ಕೊಂದಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದು, ಘಟನೆಯಲ್ಲಿ ಭಾಗಿಯಾದ ಆನೆಯನ್ನು ಪತ್ತೆ ಹಚ್ಚಿ ಸೆರೆಹಿಡಿಯಲು ಕಾರ್ಯಾಚರಣೆ ನಡೆಯುತ್ತಿದೆ ಎಂದು […]




