ಭಾರತದ ವಿರುದ್ಧ ಮ್ಯಾನ್ಮಾರ್ ಮಣ್ಣಿನ ಬಳಕೆಗೆ ಬ್ರೇಕ್: ಪ್ರಧಾನಿ ಮೋದಿ ಸಮ್ಮುಖದಲ್ಲಿ ಅಧ್ಯಕ್ಷ ಮಿನ್ ಆಂಗ್ ಲೇಂಗ್ ಭರವಸೆ
ನವದೆಹಲಿ, ಜೂನ್ 02: ಭಾರತದ ಭದ್ರತೆ ಮತ್ತು ಸಾರ್ವಭೌಮತೆಗೆ ಧಕ್ಕೆ ತರುವ ಯಾವುದೇ ದೇಶವಿರೋಧಿ ಚಟುವಟಿಕೆಗಳಿಗೆ ಮ್ಯಾನ್ಮಾರ್ ತನ್ನ ಭೂಪ್ರದೇಶವನ್ನು ಬಳಸಿಕೊಳ್ಳಲು ಖಂಡಿತವಾಗಿಯೂ ಅವಕಾಶ ನೀಡುವುದಿಲ್ಲ ಎಂದು ಮ್ಯಾನ್ಮಾರ್ ಅಧ್ಯಕ್ಷ ಯು ಮಿನ್ ಆಂಗ್ ಲೇಂಗ್ ಅವರು ಭಾರತಕ್ಕೆ ದೃಢ ಭರವಸೆ ನೀಡಿದ್ದಾರೆ. ಭಾರತಕ್ಕೆ ಐದು ದಿನಗಳ ಅಧಿಕೃತ ಪ್ರವಾಸ ಕೈಗೊಂಡಿರುವ ಅವರು, ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಡೆಸಿದ ಉನ್ನತ ಮಟ್ಟದ ದ್ವಿಪಕ್ಷೀಯ ಮಾತುಕತೆಯ ವೇಳೆ ಈ ಪ್ರಮುಖ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಉಭಯ ದೇಶಗಳ […]








